Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ