Various events on May 27, 28: Mother of seven children fair: Goddess film procession

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಹಳೆಯ ತಹಶೀಲ್ದಾರ ಕಚೇರಿ ಸಮೀಪದಲ್ಲಿರುವ ಏಳುಮಕ್ಕಳ ತಾಯಿಯ ಜಾತ್ರಾ ಮಹೋತ್ಸವ ಮೂರು ವರ್ಷಕ್ಕೊಮ್ಮೆ ಅದ್ದೂರಿಯಾಗಿ ಜರುಗುತ್ತಿದ್ದು ದೇವಿ ಚಿತ್ರದ ಮೆರವಣಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
ಪಟ್ಟಣದ ಕಿಲ್ಲಾದಲ್ಲಿರುವ ಹಳೆಯ ಬಾವಿಯಿಂದ ದೇವಿಯ ಚಿತ್ರದೊಂದಿಗೆ ದೇವಸ್ಥಾನದವರೆಗೆ 101 ಕುಂಭಗಳನ್ನು ಹೊತ್ತುಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.

ಚಲವಾದಿ ಸಮಾಜದ ಮುಖಂಡರಾದ ರೇವಣಪ್ಪ ಹರಿಜನ, ಶಿವಪ್ಪ ಅಜಮನಿ, ಪುರಸಭೆ ಸದಸ್ಯ ಶಿವು ಶಿವಪೂರ, ಕೆಯುಸಿ ಬ್ಯಾಂಕನ ನಿರ್ದೇಶಕ ಶ್ರೀಕಾಂತ ಚಲವಾದಿ, ರವಿ ಚಲವಾದಿ, ಯಲ್ಲಪ್ಪ ಅಜಮನಿ, ಚನ್ನಪ್ಪ ಮೂಕಿಹಾಳ, ರಾಮು ಹಂಗರಗಿ, ಮಹಾಂತೇಶ ಚಲವಾದಿ, ಶಂಕರ ಅಜಮನಿ, ಪವಾಡೆಪ್ಪ ದೊಡ್ಡಮನಿ, ಸಿದ್ದಪ್ಪ ಚಲವಾದಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೇ.27 ರಂದು ವಾದಿ ಪ್ರತಿವಾದಿ ಗೀಗೀ ಪದಗಳ ಕಾರ್ಯಕ್ರಮ, ಸಾಯಂಕಾಲ 6ಕ್ಕೆ ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮಸಭೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕುಂಟೋಜಿ ಚೆನ್ನವೀರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದು ಶಾಸಕ ಸಿ. ಎಸ್. ನಾಡಗೌಡ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿ-ಧಾರವಾಡ ಶಾಸಕ ಪ್ರಸಾದ ಅಬ್ಬಯ, ಸಿದ್ದಣ್ಣ ಮೇಟಿ ಉದ್ಟಾಟಿಸುವರು. ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ಮಾಜಿ ಶಾಸಕ ರಾಜು ಆಲಗೂರ, ಪುರಸಭೆ ಅಧ್ಯಕ್ಷ್ಯ ಮಹಿಬೂಬ ಗೊಳಸಂಗಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಸೇರಿದಂತೆ ಅನೇಕರು ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ರಾತ್ರಿ ರಸಮಂಜರಿ ಕಾರ್ಯಕ್ರಮ, ಮೇ. 28 ರಂದು ವಾದಿ ಪ್ರತಿವಾದಿ ಗೀ ಗೀ ಪದಗಳ ಕಾರ್ಯಕ್ರಮ, ಸಂಜೆ 6ಕ್ಕೆ ಕಲಶ ಶಿಖರಕ್ಕೇರಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ