Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ