Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ