Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ