Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ