Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ