Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ