Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು