Work stoppage by civil workers demanding fulfillment of demand

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಮುದ್ದೇಬಿಹಾಳ : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪೌರಕಾರ್ಮಿಕರ ಸಂಘದ ವತಿಯಿಂದ ಇಲ್ಲಿನ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪುರಸಭೆ ಎದುರಿಗೆ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಸಂಘದ ಉಪಾಧ್ಯಕ್ಷ ರಾಮು ಹಂಗರಗಿ ಮಾತನಾಡಿ, ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಹಾಗೂ ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಕುಡಿವ ನೀರು ಪೂರೈಕೆ ವಿಭಾಗದ ಶಿವಣ್ಣ ಬೋಳಿ ಮಾತನಾಡಿ, ಕುಡಿವ ನೀರುಪೂರೈಕೆ ಯತಾಸ್ಥಿತಿಯಲ್ಲಿರಲಿದ್ದು ಇನ್ನುಳಿದ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಶಿವಪ್ಪ ಅಜಮನಿ, ಬಸಪ್ಪ ಚಲವಾದಿ, ಸಾಬಣ್ಣ ಚಲವಾದಿ, ಶರಣಪ್ಪ ಮೂಕಿಹಾಳ, ಪರಸಪ್ಪ ಚಲವಾದಿ, ಬಸಪ್ಪ ಚಲವಾದಿ, ಸಂತೋಷ್ ಚಲವಾದಿ, ಬಸವರಾಜ್ ಚಲವಾದಿ, ವಿಶ್ವನಾಥ್ ಅಜಮನಿ, ರೇಣುಕಾ ಚಲವಾದಿ, ಯಲ್ಲವ ಚಲವಾದಿ, ರೇಣುಕಾ ವಡವಡಗಿ, ಸತ್ಯವ್ವ ದೊಡಮನಿ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ