Jatra Mahotsava mother of seven children: Constitution is the country's bible, myth, scripture - Nad Gowda

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಮುದ್ದೇಬಿಹಾಳ : ಶೋಷಿತ ಸಮುದಾಯಗಳಿಗೆ ವಿದ್ಯೆ ಹಾಗೂ ಅಂತಸ್ತು ಸರಿಸಮಾನವಾಗಿ ಬರಬೇಕು ಎಂಬ ಉದ್ದೇಶವಿಟ್ಟುಕೊಂಡು ಡಾ.ಅಂಬೇಡ್ಕರ್ ಬರೆದಿರುವ ಸಂವಿದಾನ ಈ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ ಆಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಬಳಿ ಇರುವ ಏಳು ಮಕ್ಕಳ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಇತಿಹಾಸ ಓದಿ ಮರೆತಿಲ್ಲ. ಅವರು ಸಮಾಜದ ಬಗ್ಗೆ ಯೋಚಿಸಿ ಸಂವಿದಾನ ಬರೆದಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುವುದಲ್ಲ. ಸಮಾಜದಲ್ಲಿ ಮುಂದೆ ಬರುವ ಚಿಂತನೆ ಇರಬೇಕು. ದೇವರ ಆರಾಧನೆ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿರುವ ಕಾರ್ಯ ಹೊಸ ಚಿಂತನೆ, ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು.

ಮುದ್ದೇಬಿಹಾಳದಲ್ಲಿ ಎಸ್.ಸಿ. ಎಸ್ಟಿ ಜನಾಂಗದವರ ಮಕ್ಕಳಿಗೆ ಮೂವ್ವತ್ತು ಕೋಟಿ ರೂ. ವೆಚ್ಚದಲ್ಲಿ ವಸತಿ ಕಾಲೇಜು ಕಟ್ಟಿಸಿದ್ದೇವೆ. ನಮ್ಮ ಸರ್ಕಾರ 156 ಭರವಸೆಗಳನ್ನು ಈಡೇರಿಸಿದೆ ಎಂದರು.

ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ದೇವಿಗೆ ಬಲಿ ಕೊಡುವ ಸಂಪ್ರದಾಯ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಇಲ್ಲ. ಮಹಾತ್ಮಾ ಗಾಂಧೀಜಿ ಅವರು ಅಲ್ಲಿಗೆ ಭೇಟಿ ನೀಡಿದ್ದಾಗ ಪ್ರಾಣಿ ಬಲಿ ವಿರೋಧಿಸಿದರು. ಅಷ್ಟಕ್ಕೂ ದೇವಿಗೆ ರಕ್ತದ ಅಭಿಷೇಕವೇ ಬೇಕಾದರೆ ಸೀರಿಂಜ್‌ನಲ್ಲಿ ಪ್ರಾಣಿಗಳ ಅಲ್ಪ ರಕ್ತ ತೆಗೆದು ದೇವಿಗೆ ನೈವೇದ್ಯ ಅರ್ಪಿಸುವ ಸಲಹೆ ನೀಡಿದಾಗ ಅದನ್ನು ಒಪ್ಪಿ ಇಂದಿಗೂ ಅಲ್ಲಿ ಪ್ರಾಣಿ ಬಲಿ ಆಚರಣೆ ಇಲ್ಲ. ನೀವೆಲ್ಲ ಮೂಢನಂಬಿಕೆ ಬದಿಗಿಡಿ. ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡಬೇಡಿ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ, ಮುಖಂಡರಾದ ರೇವಣೆಪ್ಪ ಹರಿಜನ,ಯಲ್ಲಪ್ಪ ಚಲವಾದಿ, ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕ ಶ್ರೀಕಾಂತ ಚಲವಾದಿ, ಅಕ್ಷಯ ಅಜಮನಿ, ವಾಯ್.ಎಚ್.ವಿಜಯಕರ್ ಮೊದಲಾದವರು ಇದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಶೈಲ ಹೂಗಾರ ನೇತೃತ್ವದ ಇಂಚರ ಮೆಲೋಡಿಸ್ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ