Jatra Mahotsava mother of seven children: Constitution is the country's bible, myth, scripture - Nad Gowda

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಮುದ್ದೇಬಿಹಾಳ : ಶೋಷಿತ ಸಮುದಾಯಗಳಿಗೆ ವಿದ್ಯೆ ಹಾಗೂ ಅಂತಸ್ತು ಸರಿಸಮಾನವಾಗಿ ಬರಬೇಕು ಎಂಬ ಉದ್ದೇಶವಿಟ್ಟುಕೊಂಡು ಡಾ.ಅಂಬೇಡ್ಕರ್ ಬರೆದಿರುವ ಸಂವಿದಾನ ಈ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ ಆಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಬಳಿ ಇರುವ ಏಳು ಮಕ್ಕಳ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಇತಿಹಾಸ ಓದಿ ಮರೆತಿಲ್ಲ. ಅವರು ಸಮಾಜದ ಬಗ್ಗೆ ಯೋಚಿಸಿ ಸಂವಿದಾನ ಬರೆದಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುವುದಲ್ಲ. ಸಮಾಜದಲ್ಲಿ ಮುಂದೆ ಬರುವ ಚಿಂತನೆ ಇರಬೇಕು. ದೇವರ ಆರಾಧನೆ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿರುವ ಕಾರ್ಯ ಹೊಸ ಚಿಂತನೆ, ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು.

ಮುದ್ದೇಬಿಹಾಳದಲ್ಲಿ ಎಸ್.ಸಿ. ಎಸ್ಟಿ ಜನಾಂಗದವರ ಮಕ್ಕಳಿಗೆ ಮೂವ್ವತ್ತು ಕೋಟಿ ರೂ. ವೆಚ್ಚದಲ್ಲಿ ವಸತಿ ಕಾಲೇಜು ಕಟ್ಟಿಸಿದ್ದೇವೆ. ನಮ್ಮ ಸರ್ಕಾರ 156 ಭರವಸೆಗಳನ್ನು ಈಡೇರಿಸಿದೆ ಎಂದರು.

ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ದೇವಿಗೆ ಬಲಿ ಕೊಡುವ ಸಂಪ್ರದಾಯ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಇಲ್ಲ. ಮಹಾತ್ಮಾ ಗಾಂಧೀಜಿ ಅವರು ಅಲ್ಲಿಗೆ ಭೇಟಿ ನೀಡಿದ್ದಾಗ ಪ್ರಾಣಿ ಬಲಿ ವಿರೋಧಿಸಿದರು. ಅಷ್ಟಕ್ಕೂ ದೇವಿಗೆ ರಕ್ತದ ಅಭಿಷೇಕವೇ ಬೇಕಾದರೆ ಸೀರಿಂಜ್‌ನಲ್ಲಿ ಪ್ರಾಣಿಗಳ ಅಲ್ಪ ರಕ್ತ ತೆಗೆದು ದೇವಿಗೆ ನೈವೇದ್ಯ ಅರ್ಪಿಸುವ ಸಲಹೆ ನೀಡಿದಾಗ ಅದನ್ನು ಒಪ್ಪಿ ಇಂದಿಗೂ ಅಲ್ಲಿ ಪ್ರಾಣಿ ಬಲಿ ಆಚರಣೆ ಇಲ್ಲ. ನೀವೆಲ್ಲ ಮೂಢನಂಬಿಕೆ ಬದಿಗಿಡಿ. ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡಬೇಡಿ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ, ಮುಖಂಡರಾದ ರೇವಣೆಪ್ಪ ಹರಿಜನ,ಯಲ್ಲಪ್ಪ ಚಲವಾದಿ, ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕ ಶ್ರೀಕಾಂತ ಚಲವಾದಿ, ಅಕ್ಷಯ ಅಜಮನಿ, ವಾಯ್.ಎಚ್.ವಿಜಯಕರ್ ಮೊದಲಾದವರು ಇದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಶೈಲ ಹೂಗಾರ ನೇತೃತ್ವದ ಇಂಚರ ಮೆಲೋಡಿಸ್ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ