Program as scheduled: Preparations are complete for village deity fair on May 30

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ ಆರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ದ್ಯಾಮವ್ವನ ಕಟ್ಟೆಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಮುದ್ದೇಬಿಹಾಳ ಪಟ್ಟಣದ ಎಲ್ಲ ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ತಂಗಡಗಿ ರಸ್ತೆಯ ಆರಂಭದಿಂದ ವಿಜಯಪುರ ರಸ್ತೆ,ಆಲಮಟ್ಟಿ ರಸ್ತೆ,ಹುಡ್ಕೋ ರೋಡ್, ಮುಖ್ಯರಸ್ತೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ,ಹಾಲಿ ನಿರ್ದೇಶಕ ಸತೀಶ ಓಸ್ವಾಲ್, ಶರಣು ಸಜ್ಜನ, ಸುರೇಶಗೌಡ ಪಾಟೀಲ ಇಂಗಳಗೇರಿ ಮಾತನಾಡಿ, ಪೊಲೀಸ್ ಕಾರ್ಟರ್ಸ್ನಲ್ಲಿ ನಿರಂತರ ಐದು ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಇರಲಿದೆ. ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು ಊಟ ಮಾಡುವವರಿಗೆ ಸಮಸ್ಯೆ ಆಗದಂತೆ ವಾಟರ್‌ಫ್ರೂಫ್ ಪೆಂಡಾಲ್ ಹಾಕಿಸಿದ್ದು ಭಕ್ತಾದಿಗಳು ನಿರಾತಂಕವಾಗಿ ಪ್ರಸಾದ ಮಾಡಬಹುದಾಗಿದೆ ಎಂದರು.

ಭಾರ ಎತ್ತುವ ಸ್ಪರ್ಧೆಯನ್ನು ಕನ್ನಡ ಗಂಡು ಮಕ್ಕಳ ಶಾಲೆಯಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದು ಕಮೀಟಿ ಮುಖಂಡರು ತಿಳಿಸಿದರು.

ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಮಾತನಾಡಿ, ಮಹಿಳೆಯರು ಕುಂಭಮೇಳದಲ್ಲಿ ಪಾಲ್ಗೊಂಡು ದೇವಿಯ ಮೂರ್ತಿಗಳ ಮೆರವಣಿಗೆ ಯಶಸ್ವಿಗೊಳಿಸಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಒಗ್ಗೂಡಿ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.

ಸಮೀತಿ ಪ್ರಮುಖರಾದ ಕಾಮರಾಜ ಬಿರಾದಾರ, ವಾಯ್.ಎಚ್.ವಿಜಯಕರ್, ವೆಂಕನಗೌಡ ಪಾಟೀಲ, ಉದಯ ರಾಯಚೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು.

ಜಾತ್ರೆಯಲ್ಲಿ ರಂಗಭೂಮಿ ಕಲಾವಿದರಿಗೆ, ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಟಿವಿ ಕಲಾವಿದರಿಗಷ್ಟೇ ಮಹತ್ವ ನೀಡಿರುವುದು ರಂಗಭೂಮಿ ಪ್ರೇಮಿಗಳಿಗೆ ನಿರಾಸೆಯುನ್ನುಂಟು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾತ್ರಾ ಸಮೀತಿಯ ಮುಖಂಡ ಸತೀಶ ಓಸ್ವಾಲ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,
ಈ ಬಾರಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ನಮ್ಮ ಗಮನಕ್ಕಿದೆ. ನಮ್ಮಿಂದ ಈ ವಿಷಯದಲ್ಲಿ ತಪ್ಪಾಗಿದ್ದು ಮುಂದಿನ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ದೇಣಿಗೆ ಸಂಗ್ರಹ, ಸಂಕಷ್ಟ ತೆರೆದಿದ್ದ ಮುಖಂಡ
ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳುವ ಕೆಲವು ಮುಖಂಡರು , ಮುದ್ದೇಬಿಹಾಳದಲ್ಲಿ ಕೋಟಿಗಟ್ಟಲೇ ಆಸ್ತಿ ಮಾಡಿಟ್ಟಿರುವ ಕೆಲವು ಗಣ್ಯರು, ಊರಿನ ಪ್ರಮುಖರು ಎಂದು ಹೇಳಿಕೊಳ್ಳುವವರು ದೇವಿ ಜಾತ್ರೆಯ ದೇಣಿಗೆ ಸಂಗ್ರಹಕ್ಕೆ ಹೋದಾಗ ತಮ್ಮ ಪತ್ನಿಯರನ್ನು ಮುಂದೆ ಕಳಿಸಿ ತಾವು ಊರಲ್ಲಿ ಇಲ್ಲ, ಇಷ್ಟೇ ಬರೆದುಕೊಳ್ಳಿ ಎಂದು ಅಲ್ಪಮೊತ್ತವನ್ನು ಕೊಟ್ಟು ಕಳಿಸಿದ ಉದಾಹರಣೆಗಳು ನಮ್ಮ ಬಳಿ ಇವೆ. ದೊಡ್ಡವರೆನ್ನಿಸಿಕೊಂಡವರು ಕೇವಲ ತೋರಿಕೆಗಾಗಿ ನಮ್ಮದು ಪ್ರತಿಷ್ಠಿತ ಮನೆತನಗಳು ಎಂದು ಹೇಳಿಕೊಂಡು ಪುಕ್ಕಟೆ ಪ್ರಚಾರ ಪಡೆದುಕೊಳ್ಳದೇ ಭಕ್ತಿಯಿಂದ ದೇವಿ ಜಾತ್ರೆಗೆ ದೇಣಿಗೆ ನೀಡಲು ಮುಕ್ತ ಮನಸ್ಸನ್ನು ಹೊಂದಿರುವಂತೆ ಮುಂದಿನ ದಿನಗಳಲ್ಲಿ ದೇವಿ ಅಂತವರಿಗೆ ಸದ್ಭುದ್ದಿ ಕೊಡಲಿ ಎಂದು ಹಣಕಾಸು ಸಮೀತಿಯ ಪ್ರಮುಖ ಸುನೀಲ ಇಲ್ಲೂರ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ ದೇಣಿಗೆ ಸಂಗ್ರಹದ ಸಮಯದಲ್ಲಿ ಎದುರಿಸಿದ ಸಂಕಷ್ಟವನ್ನು ತೋಡಿಕೊಂಡರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ