Program as scheduled: Preparations are complete for village deity fair on May 30

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ ಆರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ದ್ಯಾಮವ್ವನ ಕಟ್ಟೆಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಮುದ್ದೇಬಿಹಾಳ ಪಟ್ಟಣದ ಎಲ್ಲ ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ತಂಗಡಗಿ ರಸ್ತೆಯ ಆರಂಭದಿಂದ ವಿಜಯಪುರ ರಸ್ತೆ,ಆಲಮಟ್ಟಿ ರಸ್ತೆ,ಹುಡ್ಕೋ ರೋಡ್, ಮುಖ್ಯರಸ್ತೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ,ಹಾಲಿ ನಿರ್ದೇಶಕ ಸತೀಶ ಓಸ್ವಾಲ್, ಶರಣು ಸಜ್ಜನ, ಸುರೇಶಗೌಡ ಪಾಟೀಲ ಇಂಗಳಗೇರಿ ಮಾತನಾಡಿ, ಪೊಲೀಸ್ ಕಾರ್ಟರ್ಸ್ನಲ್ಲಿ ನಿರಂತರ ಐದು ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಇರಲಿದೆ. ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು ಊಟ ಮಾಡುವವರಿಗೆ ಸಮಸ್ಯೆ ಆಗದಂತೆ ವಾಟರ್‌ಫ್ರೂಫ್ ಪೆಂಡಾಲ್ ಹಾಕಿಸಿದ್ದು ಭಕ್ತಾದಿಗಳು ನಿರಾತಂಕವಾಗಿ ಪ್ರಸಾದ ಮಾಡಬಹುದಾಗಿದೆ ಎಂದರು.

ಭಾರ ಎತ್ತುವ ಸ್ಪರ್ಧೆಯನ್ನು ಕನ್ನಡ ಗಂಡು ಮಕ್ಕಳ ಶಾಲೆಯಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದು ಕಮೀಟಿ ಮುಖಂಡರು ತಿಳಿಸಿದರು.

ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಮಾತನಾಡಿ, ಮಹಿಳೆಯರು ಕುಂಭಮೇಳದಲ್ಲಿ ಪಾಲ್ಗೊಂಡು ದೇವಿಯ ಮೂರ್ತಿಗಳ ಮೆರವಣಿಗೆ ಯಶಸ್ವಿಗೊಳಿಸಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಒಗ್ಗೂಡಿ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.

ಸಮೀತಿ ಪ್ರಮುಖರಾದ ಕಾಮರಾಜ ಬಿರಾದಾರ, ವಾಯ್.ಎಚ್.ವಿಜಯಕರ್, ವೆಂಕನಗೌಡ ಪಾಟೀಲ, ಉದಯ ರಾಯಚೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು.

ಜಾತ್ರೆಯಲ್ಲಿ ರಂಗಭೂಮಿ ಕಲಾವಿದರಿಗೆ, ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಟಿವಿ ಕಲಾವಿದರಿಗಷ್ಟೇ ಮಹತ್ವ ನೀಡಿರುವುದು ರಂಗಭೂಮಿ ಪ್ರೇಮಿಗಳಿಗೆ ನಿರಾಸೆಯುನ್ನುಂಟು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾತ್ರಾ ಸಮೀತಿಯ ಮುಖಂಡ ಸತೀಶ ಓಸ್ವಾಲ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,
ಈ ಬಾರಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ನಮ್ಮ ಗಮನಕ್ಕಿದೆ. ನಮ್ಮಿಂದ ಈ ವಿಷಯದಲ್ಲಿ ತಪ್ಪಾಗಿದ್ದು ಮುಂದಿನ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ದೇಣಿಗೆ ಸಂಗ್ರಹ, ಸಂಕಷ್ಟ ತೆರೆದಿದ್ದ ಮುಖಂಡ
ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳುವ ಕೆಲವು ಮುಖಂಡರು , ಮುದ್ದೇಬಿಹಾಳದಲ್ಲಿ ಕೋಟಿಗಟ್ಟಲೇ ಆಸ್ತಿ ಮಾಡಿಟ್ಟಿರುವ ಕೆಲವು ಗಣ್ಯರು, ಊರಿನ ಪ್ರಮುಖರು ಎಂದು ಹೇಳಿಕೊಳ್ಳುವವರು ದೇವಿ ಜಾತ್ರೆಯ ದೇಣಿಗೆ ಸಂಗ್ರಹಕ್ಕೆ ಹೋದಾಗ ತಮ್ಮ ಪತ್ನಿಯರನ್ನು ಮುಂದೆ ಕಳಿಸಿ ತಾವು ಊರಲ್ಲಿ ಇಲ್ಲ, ಇಷ್ಟೇ ಬರೆದುಕೊಳ್ಳಿ ಎಂದು ಅಲ್ಪಮೊತ್ತವನ್ನು ಕೊಟ್ಟು ಕಳಿಸಿದ ಉದಾಹರಣೆಗಳು ನಮ್ಮ ಬಳಿ ಇವೆ. ದೊಡ್ಡವರೆನ್ನಿಸಿಕೊಂಡವರು ಕೇವಲ ತೋರಿಕೆಗಾಗಿ ನಮ್ಮದು ಪ್ರತಿಷ್ಠಿತ ಮನೆತನಗಳು ಎಂದು ಹೇಳಿಕೊಂಡು ಪುಕ್ಕಟೆ ಪ್ರಚಾರ ಪಡೆದುಕೊಳ್ಳದೇ ಭಕ್ತಿಯಿಂದ ದೇವಿ ಜಾತ್ರೆಗೆ ದೇಣಿಗೆ ನೀಡಲು ಮುಕ್ತ ಮನಸ್ಸನ್ನು ಹೊಂದಿರುವಂತೆ ಮುಂದಿನ ದಿನಗಳಲ್ಲಿ ದೇವಿ ಅಂತವರಿಗೆ ಸದ್ಭುದ್ದಿ ಕೊಡಲಿ ಎಂದು ಹಣಕಾಸು ಸಮೀತಿಯ ಪ್ರಮುಖ ಸುನೀಲ ಇಲ್ಲೂರ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ ದೇಣಿಗೆ ಸಂಗ್ರಹದ ಸಮಯದಲ್ಲಿ ಎದುರಿಸಿದ ಸಂಕಷ್ಟವನ್ನು ತೋಡಿಕೊಂಡರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ