Program as scheduled: Preparations are complete for village deity fair on May 30

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ ಆರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ದ್ಯಾಮವ್ವನ ಕಟ್ಟೆಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಮುದ್ದೇಬಿಹಾಳ ಪಟ್ಟಣದ ಎಲ್ಲ ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ತಂಗಡಗಿ ರಸ್ತೆಯ ಆರಂಭದಿಂದ ವಿಜಯಪುರ ರಸ್ತೆ,ಆಲಮಟ್ಟಿ ರಸ್ತೆ,ಹುಡ್ಕೋ ರೋಡ್, ಮುಖ್ಯರಸ್ತೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ,ಹಾಲಿ ನಿರ್ದೇಶಕ ಸತೀಶ ಓಸ್ವಾಲ್, ಶರಣು ಸಜ್ಜನ, ಸುರೇಶಗೌಡ ಪಾಟೀಲ ಇಂಗಳಗೇರಿ ಮಾತನಾಡಿ, ಪೊಲೀಸ್ ಕಾರ್ಟರ್ಸ್ನಲ್ಲಿ ನಿರಂತರ ಐದು ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಇರಲಿದೆ. ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು ಊಟ ಮಾಡುವವರಿಗೆ ಸಮಸ್ಯೆ ಆಗದಂತೆ ವಾಟರ್‌ಫ್ರೂಫ್ ಪೆಂಡಾಲ್ ಹಾಕಿಸಿದ್ದು ಭಕ್ತಾದಿಗಳು ನಿರಾತಂಕವಾಗಿ ಪ್ರಸಾದ ಮಾಡಬಹುದಾಗಿದೆ ಎಂದರು.

ಭಾರ ಎತ್ತುವ ಸ್ಪರ್ಧೆಯನ್ನು ಕನ್ನಡ ಗಂಡು ಮಕ್ಕಳ ಶಾಲೆಯಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದು ಕಮೀಟಿ ಮುಖಂಡರು ತಿಳಿಸಿದರು.

ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಮಾತನಾಡಿ, ಮಹಿಳೆಯರು ಕುಂಭಮೇಳದಲ್ಲಿ ಪಾಲ್ಗೊಂಡು ದೇವಿಯ ಮೂರ್ತಿಗಳ ಮೆರವಣಿಗೆ ಯಶಸ್ವಿಗೊಳಿಸಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಒಗ್ಗೂಡಿ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.

ಸಮೀತಿ ಪ್ರಮುಖರಾದ ಕಾಮರಾಜ ಬಿರಾದಾರ, ವಾಯ್.ಎಚ್.ವಿಜಯಕರ್, ವೆಂಕನಗೌಡ ಪಾಟೀಲ, ಉದಯ ರಾಯಚೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು.

ಜಾತ್ರೆಯಲ್ಲಿ ರಂಗಭೂಮಿ ಕಲಾವಿದರಿಗೆ, ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಟಿವಿ ಕಲಾವಿದರಿಗಷ್ಟೇ ಮಹತ್ವ ನೀಡಿರುವುದು ರಂಗಭೂಮಿ ಪ್ರೇಮಿಗಳಿಗೆ ನಿರಾಸೆಯುನ್ನುಂಟು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾತ್ರಾ ಸಮೀತಿಯ ಮುಖಂಡ ಸತೀಶ ಓಸ್ವಾಲ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,
ಈ ಬಾರಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ನಮ್ಮ ಗಮನಕ್ಕಿದೆ. ನಮ್ಮಿಂದ ಈ ವಿಷಯದಲ್ಲಿ ತಪ್ಪಾಗಿದ್ದು ಮುಂದಿನ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ದೇಣಿಗೆ ಸಂಗ್ರಹ, ಸಂಕಷ್ಟ ತೆರೆದಿದ್ದ ಮುಖಂಡ
ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳುವ ಕೆಲವು ಮುಖಂಡರು , ಮುದ್ದೇಬಿಹಾಳದಲ್ಲಿ ಕೋಟಿಗಟ್ಟಲೇ ಆಸ್ತಿ ಮಾಡಿಟ್ಟಿರುವ ಕೆಲವು ಗಣ್ಯರು, ಊರಿನ ಪ್ರಮುಖರು ಎಂದು ಹೇಳಿಕೊಳ್ಳುವವರು ದೇವಿ ಜಾತ್ರೆಯ ದೇಣಿಗೆ ಸಂಗ್ರಹಕ್ಕೆ ಹೋದಾಗ ತಮ್ಮ ಪತ್ನಿಯರನ್ನು ಮುಂದೆ ಕಳಿಸಿ ತಾವು ಊರಲ್ಲಿ ಇಲ್ಲ, ಇಷ್ಟೇ ಬರೆದುಕೊಳ್ಳಿ ಎಂದು ಅಲ್ಪಮೊತ್ತವನ್ನು ಕೊಟ್ಟು ಕಳಿಸಿದ ಉದಾಹರಣೆಗಳು ನಮ್ಮ ಬಳಿ ಇವೆ. ದೊಡ್ಡವರೆನ್ನಿಸಿಕೊಂಡವರು ಕೇವಲ ತೋರಿಕೆಗಾಗಿ ನಮ್ಮದು ಪ್ರತಿಷ್ಠಿತ ಮನೆತನಗಳು ಎಂದು ಹೇಳಿಕೊಂಡು ಪುಕ್ಕಟೆ ಪ್ರಚಾರ ಪಡೆದುಕೊಳ್ಳದೇ ಭಕ್ತಿಯಿಂದ ದೇವಿ ಜಾತ್ರೆಗೆ ದೇಣಿಗೆ ನೀಡಲು ಮುಕ್ತ ಮನಸ್ಸನ್ನು ಹೊಂದಿರುವಂತೆ ಮುಂದಿನ ದಿನಗಳಲ್ಲಿ ದೇವಿ ಅಂತವರಿಗೆ ಸದ್ಭುದ್ದಿ ಕೊಡಲಿ ಎಂದು ಹಣಕಾಸು ಸಮೀತಿಯ ಪ್ರಮುಖ ಸುನೀಲ ಇಲ್ಲೂರ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ ದೇಣಿಗೆ ಸಂಗ್ರಹದ ಸಮಯದಲ್ಲಿ ಎದುರಿಸಿದ ಸಂಕಷ್ಟವನ್ನು ತೋಡಿಕೊಂಡರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು