Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ