Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ