Opening of village deity fair: Five days of continuous Dasoha service is appreciated everywhere

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು.

5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ ಧನ್ಯತೆ ಮೆರೆದರು.

ಮಂಗಲೋತ್ಸವ ದಿನದಂದು ಶಾರದಾದೇವಿ ಹಾಗೂ ಗ್ರಾಮದೇವತೆಯ ಮೂರ್ತಿಗಳನ್ನು ವಾದ್ಯ ವೈಭವಗಳೊಂದಿಗೆ ಮೆರವಣಿಗೆ ನಡೆಸಿ ಮೂಲ ಸ್ಥಳಕ್ಕೆ ಕಳಿಸಿಕೊಡಲಾಯಿತು.

ಮೆಚ್ಚುಗೆಗೆ ಪಾತ್ರವಾದ ದಾಸೋಹ ಸೇವೆ: ನೂರಾರು ಗಣ್ಯರು ಪ್ರಸಾದ ಸೇವೆಗೆ ಹೆಚ್ಚಿನ ದೇಣಿಗೆ ನೀಡಿದ ಕಾರಣದಿಂದ ಐದು ದಿನಗಳವರೆಗೆ ನಿರಂತರವಾಗಿ ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ಪ್ರಸಾದದ ವ್ಯವಸ್ಥೆ ಮಾಡಿದ್ದು ಗಮನ ಸೆಳೆಯಿತು.ದಿನವೂ ಬೇರೆ ಬೇರೆ ಪದಾರ್ಥಗಳನ್ನು ಮಾಡುವ ಮೂಲಕ ಲಕ್ಷಾಂತರ ಭಕ್ತರು ಪ್ರಸಾದ ಸ್ವೀಕರಿಸಿದರು.

ಇದಲ್ಲದೇ ಹುಡ್ಕೋದ ಗವಿಸಿದ್ದೇಶ್ವರ ವೇದಿಕೆಯಲ್ಲಿ, ಬಿಡಿಒ ಕ್ವಾರ್ಟರ್ಸ್ನಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ರಂಜಿಸಿದವು. ಇಡೀ ಊರಿನ ತುಂಬೆಲ್ಲಾ ಲೈಟಿನ ಅಲಂಕಾರ ಜಾತ್ರೆಯ ಕಳೆಯನ್ನು ಇಮ್ಮಡಿಸಿತ್ತು. ಜಾತ್ರಾ ಕಮೀಟಿಯವರು ಕೈಗೊಂಡ ಸಂಘಟಿತ ಹಾಗೂ ವ್ಯವಸ್ಥಿತ ಯೋಜನೆಗಳಿಂದ ಜಾತ್ರೆ ಅದ್ದೂರಿಯಾಗಿ ಜರುಗಿದ್ದು ಹಿಂದೂ ಮುಸ್ಲಿಂ ಬಾಂಧವರ ಭಾವೈಕ್ಯತೆಗೆ ಸಾಕ್ಷಿಯಾಯಿತು. ಪೊಲೀಸ್ ಇಲಾಖೆಯವರು ಕೈಗೊಂಡ ಭದ್ರತೆ, ಟ್ರಾಫಿಕ್ ನಿಯಂತ್ರಣ ಕ್ರಮಗಳು, ಮಾಜಿ ಸೈನಿಕರ ಸೇವೆಯನ್ನು ಜಾತ್ರೆಯಲ್ಲಿ ಸಮಸ್ಯೆ ಕಂಡು ಬರದಂತೆ ಆಯಿತು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ