Cup for RCB: Excitement of fans beyond measure

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ

ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ ಜರುಗುತ್ತಿದ್ದು ಮಂಗಳವಾರ ಜಾತ್ರೆಯ ಕಡೆಯ ದಿನವಾಗಿತ್ತು. ರಾತ್ರಿ ಹೆಚ್ಚಿನ ಜನಸಂದಣಿ ಬಸವೇಶ್ವರ ವೃತ್ತ, ವಿಬಿಸಿ ಹೈಸ್ಕೂಲ್ ಮೈದಾನ, ಗ್ರಾಮದೇವತೆ ವೇದಿಕೆ ಬಳಿ ಜಮಾಯಿಸಿದ್ದರು. ಆರ್.ಸಿ.ಬಿ ಪಂದ್ಯದ ಪ್ರತಿ ಕ್ಷಣವನ್ನೂ ಅಭಿಮಾನಿಗಳು ತಮ್ಮ ಮೊಬೈಲ್‌ದಲ್ಲಿ ವೀಕ್ಷಿಸುತ್ತಿದ್ದರು.

ಕಡೆಯ ಓವರ್‌ನಲ್ಲಿ ಆರ್.ಸಿ.ಬಿ ಪಂದ್ಯ ಗೆಲುವು ಸಾಧಿಸಿ ಎನ್ನುವುದು ತಿಳಿಯುತ್ತಿದ್ದಂತೆ ಜಾತ್ರೆಗೆ ಆಗಮಿಸಿದ್ದ ಜನರನ್ನು ಲೆಕ್ಕಿಸದೇ ಅಭಿಮಾನಿಗಳ ಹುಚ್ಚಾಟ ಮೇರೆ ಮೀರಿತು. ಸಾವಿರಾರು ಸಂಖ್ಯೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಆರ್.ಸಿ.ಬಿ., ಆರ್.ಸಿ.ಬಿ., ಎಂದು ಘೋಷಣೆ ಹಾಕುತ್ತಾ ಕುಣಿದು ಕುಪ್ಪಳಿಸ ತೊಡಗಿದ್ದರು.

ಇದರಿಂದಾಗಿ ಜಾತ್ರೆಗೆ ಆಗಮಿಸಿದ್ದ ಗರ್ಭಿಣಿಯರು, ಮಹಿಳೆಯರು ಮಕ್ಕಳಿಗೆ ತೊಂದರೆ ಉಂಟಾಯಿತು. ಕೂಡಲೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸರು ಗುಂಪು ಸೇರಿ ಸಮಸ್ಯೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿದರೂ ಗಮನ ಹರಿಸದೇ ಮತ್ತಷ್ಟು ಯುವಕರು ವೃತ್ತಕ್ಕೆ ಬಂದು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಲು ಶುರು ಮಾಡಿದರು. ಒಂದು ಗುಂಪು ಆರ್.ಸಿ.ಬಿ ಎನ್ನುತ್ತಾ ಮೆರವಣಿಗೆ ಹೊರಟಿದ್ದನ್ನು ಕಂಡ ಪಿಎಸ್‌ಐ ಸಂಜಯ ತಿಪರೆಡ್ಡಿ ಕೂಡಲೇ ಇದನ್ನು ನಿಲ್ಲಿಸುವಂತೆ ಸೂಚಿಸಿದರು.

ಆದರೆ ಕೆಲವರು ಅವರ ಮಾತಿಗೆ ಬೆಲೆ ನೀಡದೇ ಇದ್ದರಿಂದ ತಮ್ಮ ಸಿಬ್ಬಂದಿಗೆ ಸೂಚಿಸಿ ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು. ಕೈಗೆ ಸಿಕ್ಕವರ ಮೇಲೆ ಲಾಠಿ ಬೀಸಿ ಯುವಕರನ್ನು ಉತ್ಸಾಹಕ್ಕೆ ಬ್ರೇಕ್ ಹಾಕಿದರು. ಘಟನೆಯಲ್ಲಿ ಓರ್ವನಿಗೆ ಬಾಸುಂಡೆ ಬಂದಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು.

ಪೇದೆ ಸಂಗಮೇಶ ಚಲವಾದಿ ಅವರಿಗೆ ಗದ್ದಲದಲ್ಲಿ ಒಳಪೆಟ್ಟಾಗಿದ್ದು ಅವರು ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಒಮ್ಮೇಲೆ ಸಾವಿರಾರು ಸಂಖ್ಯೆಯಲ್ಲಿ ಬಂದ ಯುವಕರು ಟ್ರಾಫಿಕ್ ಸಂಚಾರಕ್ಕೆ ಅಡ್ಡಿಪಡಿಸಲು ಮುಂದಾದರು. ಟ್ರಕ್ ಮೇಲೆ ಜೋರಾದ ಸೌಂಡ್ ಹಾಕಿಕೊಂಡು ಗದ್ದಲ ಸೃಷ್ಟಿಸಲು ಮುಂದಾದರು. ತಕ್ಷಣ ನಿಯಂತ್ರಣಕ್ಕೆ ತರಲು ಲಾಠಿ ಬೀಸಿದ್ದೇವೆ. ಘಟನೆಯಲ್ಲಿ ನಮ್ಮವರಿಗೂ ಗಾಯವಾಗಿದೆ. ಘಟನೆಯ ವಿಡಿಯೋ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕುಣಿದು ಕುಪ್ಪಳಿಸಿದ ಬಿಗ್‌ಬಾಸ್ ವಿಜೇತ ಹಣಮಂತ ಲಮಾಣಿ: ಆರ್.ಸಿ.ಬಿ ಪಂದ್ಯ ಗೆಲ್ಲುತ್ತಿದ್ದಂತೆ ಮುದ್ದೇಬಿಹಾಳದ ಗ್ರಾಮ ದೇವತೆ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಗಮಿಸಿದ್ದ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ವೇದಿಕೆಯಲ್ಲಿಯೇ ಕುಣಿದಾಡಿ ಸಂಭ್ರಮಿಸಿದರು. ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಯುವಕ ಅನಿಲ್ ನಾಯಕ, ವಿಷ್ಣು ಲಮಾಣಿ ವಿಜಯೋತ್ಸವವನ್ನು ಆಚರಿಸಿದರು. ಅಲ್ಲದೇ ವೇದಿಕೆಯಲ್ಲಿ ಆಗಮಿಸಿದ್ದ ಕಲಾವಿದರಾದ ದಿಯಾ ಹೆಗಡೆ, ಸುಹಾನಾ ಸಯ್ಯದ, ರೇವಣಸಿದ್ದ ಪುಲಾರಿ, ಶ್ರೀರಾಮ ಕಾಸರ, ಸಮನ್ವಿ ರೈ, ಕರಿಬಸವ ತಡಕಲ್ಲ, ಭೂಮಿಕಾ, ಗೋಪಾಲ ಹೂಗಾರ, ಶ್ರೀಶೈಲ ಹೂಗಾರ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸೇರಿದ್ದ 20ಸಾವಿರಕ್ಕೂ ಅಧಿಕ ಸಂಖ್ಯೆಯ ಜನ ಆರ್.ಸಿ.ಬಿ ಗೆಲುವು ಸಂಭ್ರಮಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು