Cup for RCB: Excitement of fans beyond measure

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ

ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ ಜರುಗುತ್ತಿದ್ದು ಮಂಗಳವಾರ ಜಾತ್ರೆಯ ಕಡೆಯ ದಿನವಾಗಿತ್ತು. ರಾತ್ರಿ ಹೆಚ್ಚಿನ ಜನಸಂದಣಿ ಬಸವೇಶ್ವರ ವೃತ್ತ, ವಿಬಿಸಿ ಹೈಸ್ಕೂಲ್ ಮೈದಾನ, ಗ್ರಾಮದೇವತೆ ವೇದಿಕೆ ಬಳಿ ಜಮಾಯಿಸಿದ್ದರು. ಆರ್.ಸಿ.ಬಿ ಪಂದ್ಯದ ಪ್ರತಿ ಕ್ಷಣವನ್ನೂ ಅಭಿಮಾನಿಗಳು ತಮ್ಮ ಮೊಬೈಲ್‌ದಲ್ಲಿ ವೀಕ್ಷಿಸುತ್ತಿದ್ದರು.

ಕಡೆಯ ಓವರ್‌ನಲ್ಲಿ ಆರ್.ಸಿ.ಬಿ ಪಂದ್ಯ ಗೆಲುವು ಸಾಧಿಸಿ ಎನ್ನುವುದು ತಿಳಿಯುತ್ತಿದ್ದಂತೆ ಜಾತ್ರೆಗೆ ಆಗಮಿಸಿದ್ದ ಜನರನ್ನು ಲೆಕ್ಕಿಸದೇ ಅಭಿಮಾನಿಗಳ ಹುಚ್ಚಾಟ ಮೇರೆ ಮೀರಿತು. ಸಾವಿರಾರು ಸಂಖ್ಯೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಆರ್.ಸಿ.ಬಿ., ಆರ್.ಸಿ.ಬಿ., ಎಂದು ಘೋಷಣೆ ಹಾಕುತ್ತಾ ಕುಣಿದು ಕುಪ್ಪಳಿಸ ತೊಡಗಿದ್ದರು.

ಇದರಿಂದಾಗಿ ಜಾತ್ರೆಗೆ ಆಗಮಿಸಿದ್ದ ಗರ್ಭಿಣಿಯರು, ಮಹಿಳೆಯರು ಮಕ್ಕಳಿಗೆ ತೊಂದರೆ ಉಂಟಾಯಿತು. ಕೂಡಲೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸರು ಗುಂಪು ಸೇರಿ ಸಮಸ್ಯೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿದರೂ ಗಮನ ಹರಿಸದೇ ಮತ್ತಷ್ಟು ಯುವಕರು ವೃತ್ತಕ್ಕೆ ಬಂದು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಲು ಶುರು ಮಾಡಿದರು. ಒಂದು ಗುಂಪು ಆರ್.ಸಿ.ಬಿ ಎನ್ನುತ್ತಾ ಮೆರವಣಿಗೆ ಹೊರಟಿದ್ದನ್ನು ಕಂಡ ಪಿಎಸ್‌ಐ ಸಂಜಯ ತಿಪರೆಡ್ಡಿ ಕೂಡಲೇ ಇದನ್ನು ನಿಲ್ಲಿಸುವಂತೆ ಸೂಚಿಸಿದರು.

ಆದರೆ ಕೆಲವರು ಅವರ ಮಾತಿಗೆ ಬೆಲೆ ನೀಡದೇ ಇದ್ದರಿಂದ ತಮ್ಮ ಸಿಬ್ಬಂದಿಗೆ ಸೂಚಿಸಿ ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು. ಕೈಗೆ ಸಿಕ್ಕವರ ಮೇಲೆ ಲಾಠಿ ಬೀಸಿ ಯುವಕರನ್ನು ಉತ್ಸಾಹಕ್ಕೆ ಬ್ರೇಕ್ ಹಾಕಿದರು. ಘಟನೆಯಲ್ಲಿ ಓರ್ವನಿಗೆ ಬಾಸುಂಡೆ ಬಂದಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು.

ಪೇದೆ ಸಂಗಮೇಶ ಚಲವಾದಿ ಅವರಿಗೆ ಗದ್ದಲದಲ್ಲಿ ಒಳಪೆಟ್ಟಾಗಿದ್ದು ಅವರು ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಒಮ್ಮೇಲೆ ಸಾವಿರಾರು ಸಂಖ್ಯೆಯಲ್ಲಿ ಬಂದ ಯುವಕರು ಟ್ರಾಫಿಕ್ ಸಂಚಾರಕ್ಕೆ ಅಡ್ಡಿಪಡಿಸಲು ಮುಂದಾದರು. ಟ್ರಕ್ ಮೇಲೆ ಜೋರಾದ ಸೌಂಡ್ ಹಾಕಿಕೊಂಡು ಗದ್ದಲ ಸೃಷ್ಟಿಸಲು ಮುಂದಾದರು. ತಕ್ಷಣ ನಿಯಂತ್ರಣಕ್ಕೆ ತರಲು ಲಾಠಿ ಬೀಸಿದ್ದೇವೆ. ಘಟನೆಯಲ್ಲಿ ನಮ್ಮವರಿಗೂ ಗಾಯವಾಗಿದೆ. ಘಟನೆಯ ವಿಡಿಯೋ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕುಣಿದು ಕುಪ್ಪಳಿಸಿದ ಬಿಗ್‌ಬಾಸ್ ವಿಜೇತ ಹಣಮಂತ ಲಮಾಣಿ: ಆರ್.ಸಿ.ಬಿ ಪಂದ್ಯ ಗೆಲ್ಲುತ್ತಿದ್ದಂತೆ ಮುದ್ದೇಬಿಹಾಳದ ಗ್ರಾಮ ದೇವತೆ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಗಮಿಸಿದ್ದ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ವೇದಿಕೆಯಲ್ಲಿಯೇ ಕುಣಿದಾಡಿ ಸಂಭ್ರಮಿಸಿದರು. ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಯುವಕ ಅನಿಲ್ ನಾಯಕ, ವಿಷ್ಣು ಲಮಾಣಿ ವಿಜಯೋತ್ಸವವನ್ನು ಆಚರಿಸಿದರು. ಅಲ್ಲದೇ ವೇದಿಕೆಯಲ್ಲಿ ಆಗಮಿಸಿದ್ದ ಕಲಾವಿದರಾದ ದಿಯಾ ಹೆಗಡೆ, ಸುಹಾನಾ ಸಯ್ಯದ, ರೇವಣಸಿದ್ದ ಪುಲಾರಿ, ಶ್ರೀರಾಮ ಕಾಸರ, ಸಮನ್ವಿ ರೈ, ಕರಿಬಸವ ತಡಕಲ್ಲ, ಭೂಮಿಕಾ, ಗೋಪಾಲ ಹೂಗಾರ, ಶ್ರೀಶೈಲ ಹೂಗಾರ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸೇರಿದ್ದ 20ಸಾವಿರಕ್ಕೂ ಅಧಿಕ ಸಂಖ್ಯೆಯ ಜನ ಆರ್.ಸಿ.ಬಿ ಗೆಲುವು ಸಂಭ್ರಮಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು