Cup for RCB: Excitement of fans beyond measure

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ

ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ ಜರುಗುತ್ತಿದ್ದು ಮಂಗಳವಾರ ಜಾತ್ರೆಯ ಕಡೆಯ ದಿನವಾಗಿತ್ತು. ರಾತ್ರಿ ಹೆಚ್ಚಿನ ಜನಸಂದಣಿ ಬಸವೇಶ್ವರ ವೃತ್ತ, ವಿಬಿಸಿ ಹೈಸ್ಕೂಲ್ ಮೈದಾನ, ಗ್ರಾಮದೇವತೆ ವೇದಿಕೆ ಬಳಿ ಜಮಾಯಿಸಿದ್ದರು. ಆರ್.ಸಿ.ಬಿ ಪಂದ್ಯದ ಪ್ರತಿ ಕ್ಷಣವನ್ನೂ ಅಭಿಮಾನಿಗಳು ತಮ್ಮ ಮೊಬೈಲ್‌ದಲ್ಲಿ ವೀಕ್ಷಿಸುತ್ತಿದ್ದರು.

ಕಡೆಯ ಓವರ್‌ನಲ್ಲಿ ಆರ್.ಸಿ.ಬಿ ಪಂದ್ಯ ಗೆಲುವು ಸಾಧಿಸಿ ಎನ್ನುವುದು ತಿಳಿಯುತ್ತಿದ್ದಂತೆ ಜಾತ್ರೆಗೆ ಆಗಮಿಸಿದ್ದ ಜನರನ್ನು ಲೆಕ್ಕಿಸದೇ ಅಭಿಮಾನಿಗಳ ಹುಚ್ಚಾಟ ಮೇರೆ ಮೀರಿತು. ಸಾವಿರಾರು ಸಂಖ್ಯೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಆರ್.ಸಿ.ಬಿ., ಆರ್.ಸಿ.ಬಿ., ಎಂದು ಘೋಷಣೆ ಹಾಕುತ್ತಾ ಕುಣಿದು ಕುಪ್ಪಳಿಸ ತೊಡಗಿದ್ದರು.

ಇದರಿಂದಾಗಿ ಜಾತ್ರೆಗೆ ಆಗಮಿಸಿದ್ದ ಗರ್ಭಿಣಿಯರು, ಮಹಿಳೆಯರು ಮಕ್ಕಳಿಗೆ ತೊಂದರೆ ಉಂಟಾಯಿತು. ಕೂಡಲೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸರು ಗುಂಪು ಸೇರಿ ಸಮಸ್ಯೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿದರೂ ಗಮನ ಹರಿಸದೇ ಮತ್ತಷ್ಟು ಯುವಕರು ವೃತ್ತಕ್ಕೆ ಬಂದು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಲು ಶುರು ಮಾಡಿದರು. ಒಂದು ಗುಂಪು ಆರ್.ಸಿ.ಬಿ ಎನ್ನುತ್ತಾ ಮೆರವಣಿಗೆ ಹೊರಟಿದ್ದನ್ನು ಕಂಡ ಪಿಎಸ್‌ಐ ಸಂಜಯ ತಿಪರೆಡ್ಡಿ ಕೂಡಲೇ ಇದನ್ನು ನಿಲ್ಲಿಸುವಂತೆ ಸೂಚಿಸಿದರು.

ಆದರೆ ಕೆಲವರು ಅವರ ಮಾತಿಗೆ ಬೆಲೆ ನೀಡದೇ ಇದ್ದರಿಂದ ತಮ್ಮ ಸಿಬ್ಬಂದಿಗೆ ಸೂಚಿಸಿ ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು. ಕೈಗೆ ಸಿಕ್ಕವರ ಮೇಲೆ ಲಾಠಿ ಬೀಸಿ ಯುವಕರನ್ನು ಉತ್ಸಾಹಕ್ಕೆ ಬ್ರೇಕ್ ಹಾಕಿದರು. ಘಟನೆಯಲ್ಲಿ ಓರ್ವನಿಗೆ ಬಾಸುಂಡೆ ಬಂದಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು.

ಪೇದೆ ಸಂಗಮೇಶ ಚಲವಾದಿ ಅವರಿಗೆ ಗದ್ದಲದಲ್ಲಿ ಒಳಪೆಟ್ಟಾಗಿದ್ದು ಅವರು ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಒಮ್ಮೇಲೆ ಸಾವಿರಾರು ಸಂಖ್ಯೆಯಲ್ಲಿ ಬಂದ ಯುವಕರು ಟ್ರಾಫಿಕ್ ಸಂಚಾರಕ್ಕೆ ಅಡ್ಡಿಪಡಿಸಲು ಮುಂದಾದರು. ಟ್ರಕ್ ಮೇಲೆ ಜೋರಾದ ಸೌಂಡ್ ಹಾಕಿಕೊಂಡು ಗದ್ದಲ ಸೃಷ್ಟಿಸಲು ಮುಂದಾದರು. ತಕ್ಷಣ ನಿಯಂತ್ರಣಕ್ಕೆ ತರಲು ಲಾಠಿ ಬೀಸಿದ್ದೇವೆ. ಘಟನೆಯಲ್ಲಿ ನಮ್ಮವರಿಗೂ ಗಾಯವಾಗಿದೆ. ಘಟನೆಯ ವಿಡಿಯೋ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕುಣಿದು ಕುಪ್ಪಳಿಸಿದ ಬಿಗ್‌ಬಾಸ್ ವಿಜೇತ ಹಣಮಂತ ಲಮಾಣಿ: ಆರ್.ಸಿ.ಬಿ ಪಂದ್ಯ ಗೆಲ್ಲುತ್ತಿದ್ದಂತೆ ಮುದ್ದೇಬಿಹಾಳದ ಗ್ರಾಮ ದೇವತೆ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಗಮಿಸಿದ್ದ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ವೇದಿಕೆಯಲ್ಲಿಯೇ ಕುಣಿದಾಡಿ ಸಂಭ್ರಮಿಸಿದರು. ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಯುವಕ ಅನಿಲ್ ನಾಯಕ, ವಿಷ್ಣು ಲಮಾಣಿ ವಿಜಯೋತ್ಸವವನ್ನು ಆಚರಿಸಿದರು. ಅಲ್ಲದೇ ವೇದಿಕೆಯಲ್ಲಿ ಆಗಮಿಸಿದ್ದ ಕಲಾವಿದರಾದ ದಿಯಾ ಹೆಗಡೆ, ಸುಹಾನಾ ಸಯ್ಯದ, ರೇವಣಸಿದ್ದ ಪುಲಾರಿ, ಶ್ರೀರಾಮ ಕಾಸರ, ಸಮನ್ವಿ ರೈ, ಕರಿಬಸವ ತಡಕಲ್ಲ, ಭೂಮಿಕಾ, ಗೋಪಾಲ ಹೂಗಾರ, ಶ್ರೀಶೈಲ ಹೂಗಾರ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸೇರಿದ್ದ 20ಸಾವಿರಕ್ಕೂ ಅಧಿಕ ಸಂಖ್ಯೆಯ ಜನ ಆರ್.ಸಿ.ಬಿ ಗೆಲುವು ಸಂಭ್ರಮಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ