Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು