Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು