Let's live selflessly on the Earth with the award of the Eco Protector Award: Balarama Kattimani

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ ಮನುಷ್ಯನಿಗೆ ಇರುವಷ್ಟೇ ಹಕ್ಕು ಪ್ರಾಣಿ, ಪಕ್ಷಿಗಳಿಗೂ ಇದೆ ಎಂಬುದನ್ನು ಅರಿತುಕೊಂಡು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.

ಪಟ್ಟಣದ ಹುಡ್ಕೋದ ಹಸಿರು ತೋರಣ ಉದ್ಯಾನವನದಲ್ಲಿ ಗುರುವಾರ ಹಸಿರು ತೋರಣ ಗೆಳೆಯರ ಬಳಗ, ಅರಣ್ಯ ಇಲಾಖೆ, ಪುರಸಭೆ ಮತ್ತು ತಾಲ್ಲೂಕು ಆಡಳಿತದ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡ ಘಟನೆ ಕಣ್ಣೆದುರಿಗೇ ಇದೆ. ದೊಡ್ಡ ನಗರಗಳಲ್ಲಿ ಆಮ್ಲಜನಕವನ್ನು ಹಣ ಕೊಟ್ಟು ಕೊಳ್ಳುವ ಪರಿಸ್ಥಿತಿ ಇದೆ ಎಂದು ನಾವು ಅರಿಯಬೇಕು ಎಂದರು.

ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ಬಹಳಷ್ಟು ಸಂಘಟಿತರಾಗಿ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ಇದು ಜಿಲ್ಲೆಗೇ ಮಾದರಿಯಾಗಿದೆ ಎಂದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ ಆಲಕುಡೆ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಕೆಬಿಜೆನ್ನೆಲ್ ವಿಭಾಗದ ಉಪ ಅರಣ್ಯಾಧಿಕಾರಿ ಶ್ರೀಕಾಂತ ಘೋರ್ಪಡೆ,ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ ಇದ್ದರು.

“ಪರಿಸರ ರಕ್ಷಕ” ಪ್ರಶಸ್ತಿಗೆ ಆಯ್ಕೆಯಾದ ಶರಣಪ್ಪ ನಾಗಾವಿ, ಅನಿಲಕುಮಾರ ಚಲವಾದಿ, ಶರಣಬಸಪ್ಪ ನೆಲವಾಸಿ, ಸಿದ್ದನಗೌಡ ಲಿಂಗದಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಸಿರು ತೋರಣ, ಮನೆಯಲ್ಲಿ ಮಹಾಮನೆ, ಪುರಸಭೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಗಿಡಗಳನ್ನು ನೆಟ್ಟು ನೀರೆರೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಪ್ರೇರಣಾ ಬೆಳಗಲ್ಲ ಪರಿಸರ ಗೀತೆ ಹಾಡಿದಳು. ಅಮರೇಶ ಗೂಳಿ ಸ್ವಾಗತಿಸಿದರು. ವೀರೇಶ ಢವಳಗಿ ಸನ್ಮಾನಿತರನ್ನು ಪರಿಚಯಿಸಿದರು. ಸಂಚಾಲಕ ಮಹಾಬಲೇಶ್ವರ ಗಡೇದ ನಿರೂಪಿಸಿದರು. ರವಿ ಗೂಳಿ ವಂದಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ