NREGA commits to health of laborers: P. S. Kasanakki

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೆಶಕ (ಗ್ರಾ.ಉ.) ಪಿ. ಎಸ್. ಕಸನಕ್ಕಿ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕವಡಿಮಟ್ಟಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಶುಕ್ರವಾರ ಅರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.

ದಿನ ನಿತ್ಯ ಬಿಸಿಲಿನಲ್ಲಿ ದುಡಿಯುವ ಕೂಲಿಕಾರರಿಗೆ ಮಧುಮೇಹ, ರಕ್ತದೊತ್ತಡ, ಮಲೇರಿಯಯಂತ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಅದ್ದರಿಂದ ಗ್ರಾಮ ಪಂಚಾಯತಿಯಿಂದ ಕೆಲಸ ನಿರ್ವಹಿಸುವ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣೆ ಆಯೋಜಿಸಿ ಅವರ ಅರೋಗ್ಯ ಕಾಯ್ದುಕೊಳ್ಳಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಚ. ಹಂಡ್ರಗಲ್ ಅವರು ಸ್ವತಃ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಅರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿದರು.

ಅರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಅರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.

ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಕಲ್ಮೇಶಕುಮಾರ ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸದಾಶಿವ ಗುರುಶಾಂತನವರ್, ರಚನ ಸಬರದ್, ಗ್ರಾ.ಪಂ. ಸದಸ್ಯರಾದ ರೇವಣಸಿದ್ದಯ್ಯ ಗುರುವಿನ, ಮಲಕಯ್ಯ ಪೂಜಾರಿ, ಹನುಮಂತ ಹಂಡ್ರಗಲ್, ಕಾರ್ಯದರ್ಶಿ ಅಶೋಕ ಕೊರವರ, ಈರಯ್ಯ ಹೀರೆಮಠ, ಗ್ರಾ. ಪಂ. ಸಿಬ್ಬಂದಿ ಇದ್ದರು.

Latest News

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು. ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ,

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು. ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ ಕ್ಲಾಸಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಶಾಲೆಗೆ ಹೆಸರು ನೋಂದಣಿ ಮಾಡಿಬಿಟ್ಟರೆ ಆಯಿತು ಎಂಬ ಸ್ವಭಾವದಲ್ಲಿ