NREGA commits to health of laborers: P. S. Kasanakki

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೆಶಕ (ಗ್ರಾ.ಉ.) ಪಿ. ಎಸ್. ಕಸನಕ್ಕಿ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕವಡಿಮಟ್ಟಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಶುಕ್ರವಾರ ಅರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.

ದಿನ ನಿತ್ಯ ಬಿಸಿಲಿನಲ್ಲಿ ದುಡಿಯುವ ಕೂಲಿಕಾರರಿಗೆ ಮಧುಮೇಹ, ರಕ್ತದೊತ್ತಡ, ಮಲೇರಿಯಯಂತ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಅದ್ದರಿಂದ ಗ್ರಾಮ ಪಂಚಾಯತಿಯಿಂದ ಕೆಲಸ ನಿರ್ವಹಿಸುವ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣೆ ಆಯೋಜಿಸಿ ಅವರ ಅರೋಗ್ಯ ಕಾಯ್ದುಕೊಳ್ಳಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಚ. ಹಂಡ್ರಗಲ್ ಅವರು ಸ್ವತಃ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಅರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿದರು.

ಅರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಅರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.

ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಕಲ್ಮೇಶಕುಮಾರ ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸದಾಶಿವ ಗುರುಶಾಂತನವರ್, ರಚನ ಸಬರದ್, ಗ್ರಾ.ಪಂ. ಸದಸ್ಯರಾದ ರೇವಣಸಿದ್ದಯ್ಯ ಗುರುವಿನ, ಮಲಕಯ್ಯ ಪೂಜಾರಿ, ಹನುಮಂತ ಹಂಡ್ರಗಲ್, ಕಾರ್ಯದರ್ಶಿ ಅಶೋಕ ಕೊರವರ, ಈರಯ್ಯ ಹೀರೆಮಠ, ಗ್ರಾ. ಪಂ. ಸಿಬ್ಬಂದಿ ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು