Sneha Sangam is the anniversary of the circle of friends

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ

ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ ಸಂಗಮ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ,1990-91ನೇ ಸಾಲಿನ ಎಸ್.ಎಸ್.ಎಲ್.ಸಿ ಗೆಳೆಯರ 50ನೇ ವರ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡುವ ಕಾರ್ಯಕ್ಕೆ ಮುಂದಾದಲ್ಲಿ ದೂರದಲ್ಲಿ ಇರುವವ ಸ್ನೇಹಿತರು ಅಂತಹದ್ದಕ್ಕೆ ಬೆಂಬಲಿಸುತ್ತಾರೆ. ಗೆಳೆಯರು ಸೇರಿದ್ದಲ್ಲಿ ಸ್ವರ್ಗ ನಿರ್ಮಾಣ ಆಗುತ್ತದೆ. ಸ್ನೇಹಕ್ಕೆ ಕೃಷ್ಣ ಕುಚೇಲರ ಗೆಳೆತನ ಮಾದರಿಯಾದದ್ದು ಎಂದರು.

ಸಾನಿಧ್ಯ ವಹಿಸಿದ್ದ ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಗೆಳೆಯರು ಎಂದರೆ ಅಲ್ಲಿ ನಗು, ಆತ್ಮೀಯ, ಸುಖ, ದುಃಖದ ಭಾವ ಸೇರಿ ಎಲ್ಲವೂ ಇದೆ. ಆಗಿನ ಶಾಲೆಯಲ್ಲಿ ಬಾಂಧವ್ಯ ಇತ್ತು. ಇಂದಿನ ಶಾಲೆಯಲ್ಲಿ ಆ ಬಾಂಧವ್ಯ ಇಲ್ಲ. ಕಷ್ಟದಲ್ಲಿ ಇರುತ್ತೇನೆ ಎಂದಾಗಲಷ್ಟೇ ಸಹಾಯ ಮಾಡುತ್ತೇನೆ ಎನ್ನುವುದು ಗೆಳೆತನ ಅಲ್ಲ. ದುಃಖ ನನಗೆ ಇರಲಿ, ನೀನು ಆರೋಗ್ಯವಾಗಿರು ಎಂದು ಹೇಳುವುದು ನಿಜವಾದ ಸ್ನೇಹ ಎಂದರು.

ಗೆಳೆಯರ ಬಳಗದ ನೂತನ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಶಿವಾಜಿ ಬಿಜಾಪೂರ, ಉಪಾಧ್ಯಕ್ಷ ಡಾ. ಸಿ. ಕೆ. ಶಿವಯೋಗಿಮಠ, ಪ್ರಧಾನ ಕಾರ್ಯದರ್ಶಿ ನಬಿರಸೂಲ ಮುದ್ನಾಳ, ಸಹ ಕಾರ್ಯದರ್ಶಿ ಮುಸ್ತಾಕ ಬಾಗವಾನ, ಖಜಾಂಚಿ ಆನಂದ ಜಂಬಗಿ, ಲೋಹಿತ ನಾಲತವಾಡ, ಶ್ರೀಶೈಲ ಭಾವಿಕಟ್ಟಿ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಬೇರೆ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಗೆಳೆಯರು ಭಾಗವಹಿಸಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ