Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು