Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ