Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು