Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ