Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.