Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ