Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.