Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು