Bold step of labor department to eradicate child labour: Minister Santhosh Lad

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ: ಸಚಿವ ಸಂತೋಷ ಲಾಡ್

ಬೆಂಗಳೂರು, ಜೂನ್‌ 12: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ ೨೨ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ. ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ