Funeral of a soldier with state honours

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್. ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.

ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿ ಯೋಧ ಮೃತಪಟ್ಟಿದ್ದು, ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮದ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ
ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ ತರಲಾಯಿತು.

ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ, ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ, ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು. ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಹುಣಸಗಿ ತಶೀಲದಾರರು ಹುಸೇನಾ. ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ, ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್, ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣನವರು ಪೊಲೀಸ್ ಬಂದೋಬಸ್ತ್ ನೀಡಿದರು. ಜೊತೆಯಲ್ಲಿ ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧ ವೆಂಕಟೇಶ ಎಂ ರಾಠೋಡ ಅವರ ಅಂತ್ಯಕ್ರಿಯೆ ನೆರವೇರಿತು.

ವರದಿಗಾರ : ಶಿವು ರಾಠೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ