Disfigured thugs who harvested the cow's udder

ಹಸುವಿನ ಕೆಚ್ಚಲು ಕೊಯ್ದ ದುರುಳರು

ಹಸುವಿನ ಕೆಚ್ಚಲು ಕೊಯ್ದ ದುರುಳರು

ಕುಳಗೇರಿ ಕ್ರಾಸ್: ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ.

ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು ಬೆಳಗಿನ ಜಾವ ಹಸುವಿನ ಮಾಲಿಕ ಕೊಟ್ಟಿಗೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಗಮನಕ್ಕೆ ಬಂದಿದೆ. ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ ಒಂದು ಮೊಲೆ ಕೊಯ್ದು ಪಾಪಿಗಳು ವಿಕೃತಿ ಮೆರೆದಿದ್ದಾರೆ. ಸದ್ಯ ಹಸು ರಕ್ತ ಸ್ರಾವದಿಂದ ನರಳಾಡಿದ್ದು ಸ್ಥಳೀಯ ಪಶು ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ.

ನೋವು ತೋಡಿಕೊಂಡ ಹಸುವಿನ ಮಾಲಿಕರು: ಈ ಆಕಳು ಒಬ್ಬಿಬ್ಬರಿಗೆ ಅಸಗೋಳಲ್ಲ ನಾಲ್ಕೈದು ಜನ ಮೂಗುದಾರ ಹಿಡಿದು ಈ ಕೃತ್ಯ ನಡೆಸಿರಬಹುದು ಎಂದು ಹಸುವಿನ ಮಾಲಿಕ ಬರಮಪ್ಪ ಬಸಪ್ಪ ಕುರಿ ಪತ್ರಿಕೆಗೆ ತಿಳಿಸಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ಗ್ರಾಮದ ಜನರು ಭೇಟಿ ನೀಡುತ್ತಿದ್ದು ಪಾಪಿಗಳ ಈ ಕೃತ್ಯಕ್ಕೆ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಪೂಜಿಸುವ ಗೋಮಾತೆ ದೇವರ ಸಮಾನ. ಆದರೆ ಹಾಲು ಕೊಡುವ ಗೋವಿನ ಕೆಚ್ಚಲು ಕೊಯ್ದು ಪಾಪದ ಕೆಲಸ ಮಾಡಿದ್ದಾರೆ. ಈ ದುಷ್ಕೃತ್ಯ ಎಸಗಿದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಅಂಗನವಾಡಿ ನಿವೃತ್ತ ಶಿಕ್ಷಕಿ ವೆಂಕಮ್ಮ ಕಲಬಾಶೆಟ್ಟಿ ಕೃತ್ಯವನ್ನು ಖಂಡಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು