8 thousand cusecs of water released from Basavasagar reservoir

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ ಜಲಾಶಯದ ಗರಿಷ್ಠ ಎತ್ತರದಲ್ಲಿ 491.5 ಮೀಟರ್‌ವರೆಗೂ ನೀರು ಸಂಗ್ರಹಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ, ಶನಿವಾರ ಬೆಳಗ್ಗೆವರೆಗೆ 10 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತದೆ. ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಯಾವುದೇ ಚಟುವಟಿಕೆ ನಡೆಸದಂತೆ ಕೆಬಿಜೆಎನ್ ಎಲ್ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ ಮಾಹಿತಿ ನೀಡಿದ್ದಾರೆ.

ಇಇ ಹಣಮಂತ ಕೊಣ್ಣೂರ, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಅರ್ಚಕ ರಾಘವೇಂದ್ರ ಆಚಾರ್ಯ, ಎಇಗಳಾದ ವಿಜಯ ಅರಳಿ, ಬಾಲಸುಭ್ರಮಣ್ಯಂ, ವಿರೇಶ, ಮಲ್ಲಿಕಾರ್ಜುನ, ಸುಮೀತ, ಬಾಲಚಂದ್ರ, ಹಣಮಂತ, ಸಿದ್ದು ವಡವಡಗಿ, ವಿರೇಶ ಮತ್ತಿತರರಿದ್ದರು.

ಜಲಾಶಯದ ಮಟ್ಟ: ಜಲಾಶಯದ ಗರಿಷ್ಠ ಮಟ್ಟ

492.25ಮೀ.ನಲ್ಲಿ ಇಂದು 490.99 ಮೀಟರ್ಗೆ ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿ ಗಳಲ್ಲಿ 27.80 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಒಳಹರಿವು 20ಸಾವಿರ ಕ್ಯೂಸೆಕ್ ಇದ್ದರೆ, ಹೊರ ಹರಿವು 8 ಸಾವಿರ ಕ್ಯೂಸೆಕ್ ಇದೆ.

ವರದಿ : ಶಿವು ರಾಥೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ