Circulation of fake notes – real estate worker arrested!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ಕೆಲಸ ಮಾಡುವ ರಂಗೇಗೌಡ (57) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು ಹಾಗೂ 200 ರೂ., 100 ರೂ., 50 ರೂ. ಮುಖಬೆಲೆಯ ತಲಾ 1 ನಕಲಿ ನೋಟು ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಸ್ಕವರ್ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯು ಬೇರೆಡೆಯೂ ನಕಲಿ ನೋಟುಗಳ ಚಲಾವಣೆ ಮಾಡಿರುವ ಕುರಿತಂತೆ ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ OFP 790829 ಹಾಗೂ 9TV 978202 ಕ್ರಮ ಸಂಖ್ಯೆಯ 500 ಮುಖಬೆಲೆಯ ನೋಟುಗಳು ಕಂಡುಬಂದಲ್ಲಿ, ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಜೂನ್ 14 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ

ಸಿಕ್ಕಿದ್ದು ಹೇಗೆ? : ಭದ್ರಾವತಿ ನಗರದ ಕೂಲಿ ಬ್ಲಾಕ್ ಶೆಡ್ ನಿವಾಸಿ ಅಜಯ್ ಎಂಬುವರಿಗೆ 12-6-2025 ರ ಸಂಜೆ ಡಿಸ್ಕವರ್ ಬೈಕ್ ನಲ್ಲಿ ಆಗಮಿಸಿದ ಆರೋಪಿಯು, 500 ರೂ. ನಕಲಿ ನೋಟು ನೀಡಿ ವ್ಯಾಪಾರ ಮಾಡಿ ತೆರಳಿದ್ದ. ಈ ಕುರಿತಂತೆ ಅಜಯ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಭದ್ರಾವತಿ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಮಂಜುನಾಥ್, ಪಿಎಸ್ಐ ರಮೇಶ್, ಎಎಸ್ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ವಿಜಯ್, ಶ್ರೀಧರ್, ಮಾರುತಿ ಪಾಟೀಲ್, ಪ್ರಸನ್ನ, ರಘು, ನಾಗರಾಜಪ್ಪರವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ: ಶಿವು ರಾಥೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ