Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು