Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ