If there is any loss of life due to the negligence of officials, action will be taken against them: Minister Santosh Lad

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆಯಿಂದ ಆಗಿರುವ ಹಾನಿ, ಅದಕ್ಕೆ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆಯಲ್ಲಿ ಸುಮಾರು 2 ಸಾವಿರದಷ್ಟು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಐದು ಮೀಟರ್ ರಸ್ತೆಯನ್ನು ಸ್ವಚ್ಛತೆ ಕೊಟ್ಟು, ಪ್ರತಿದಿನ 10 ಕಿ.ಮೀ ರಂತೆ ಸಂಪೂರ್ಣ ನಗರವನ್ನು ಸ್ವಚ್ಛ ಮಾಡಲು ಒಂದು ರೋಡ್ ಮ್ಯಾಪ್‍ ಸಿದ್ಧ ಮಾಡಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಹೇಳಿದರು.

ಜನರು ಜಾಗೃತರಾಗಬೇಕು ಇಳಿಜಾರು ಪ್ರದೇಶದಲ್ಲಿ ಅವರು ಮನೆ ಕಟ್ಟುತ್ತಾರೆ, ಅನಧಿಕೃತ ಜಾಗದಲ್ಲಿ ಅವರೇ ನಿವೇಶನವನ್ನು ಕಟ್ಟಿಕೊಳ್ಳುತ್ತಾರೆ, ಅನಧಿಕೃತ ಲೇಜೌಟ್‍ಗಳನ್ನು ಮಾಡಿಕೊಳ್ಳುತ್ತಾರೆ. ಇದರಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಸಾರ್ವಜನಿಕರಿಗೆ ನಾಗರಿಕ ಸಮಸ್ಯೆಗಳನ್ನು ಅರ್ಥೈಸಬೇಕು. ಅದಕ್ಕಾಗಿ ಸಾರ್ವಜನಿಕರಿಗೆ ಈ ಕುರಿತು ಮನವರಿಕೆಯಾಗಬೇಕು ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕುಗಳು ಸೇರಿ ಅಂದಾಜು ಶೇ 67 ರಷ್ಟು ಮುಂಗಾರು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾನಿ ಪರಿಶೀಲಿಸಿ ಹಾಗೂ ರೈತ ಮುಖಂಡರೊಂದಿಗೆ ಚರ್ಚೆ ಮಾಡಿ, ನಂತರ ಮತ್ತೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಎಲ್ಲ ಗ್ರಾಮ ಪಂಚಾಯತ ಅಧಿಕಾರಿಗಳವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ಆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಜನರೊಂದಿಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಬೇಕು. ಒಂದು ವೇಳೆ ನಾವು ನೆರೆಹಾವಳಿಗಳ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಇರುವುದು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮಳೆಗಾಲ ಮುಗಿಯುವವರೆಗೂ ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಜನಸಾಮಾನ್ಯರು ಯಾವುದೇ ಸಮಯದಲ್ಲಿ ಕರೆ ಮಾಡಿದರು ಅಧಿಕಾರಿಗಳು ಅದಕ್ಕೆ ಸರಿಯಾಗಿ ಸ್ಪಂದನೆ ಮಾಡಬೇಕು ಎಂದು ಹೇಳಿದರು.

ಮುಂಬರುವಂತಹ ಪ್ರತಿಯೊಂದು ಕೆ.ಡಿ.ಪಿ ಸಭೆಯಲ್ಲಿ ಎಲ್ಲಾ ಅಧಿಕಾರಿ ವರ್ಗದವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸ್ಥಳಗಳಲ್ಲಿ ಯಾವ ರೀತಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳಗಳನ್ನು ಗುರುತಿಸಬೇಕು. ಮಳೆಗಾಲ ಮುಗಿಯುವವರೆಗೂ ಅಧಿಕಾರಿಗಳು 24X7 ಕೆಲಸವನ್ನು ಮಾಡಬೇಕು ಎಂದು ಸಚಿವರು ತುಳಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ಕೂಡಲೇ ಯಾವುದೇ ರೀತಿ ಅಡಚಣೆಗಳು ಜನರಿಗೆ ಆಗದ ಹಾಗೆ ತಾತ್ಕಾಲಿಕವಾಗಿ ಆದರೂ ರಸ್ತೆ ಮಾಡಿ ಜನರಿಗೆ ಮಾರ್ಗವನ್ನು ಕಲ್ಪಿಸಬೇಕು ಎಂದು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿದರು.

ಅಂಗನವಾಡಿ, ಶಾಲೆ, ಕಾಲೇಜುಗಳ ಕಟ್ಟಡಗಳು ಮಳೆಯಿಂದ ಸೋರುತ್ತಿದ್ದರೆ ಅಂತಹ ಸ್ಥಳಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿದರೆ ಅಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆಯಾಗುತ್ತಾರೆ ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳಿಗೆ ಸಚಿವರಿಂದ ಮೊಬೈಲ್ ಕರೆ
ಸಚಿವ ಸಂತೋಷ ಲಾಡ್ ಅವರು ಸಭೆಯಲ್ಲಿಯೇ ಎಲ್ಲ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಯ ಪಂಚಾಯತ ರಾಜ್ಯ ಅಭಿವೃದ್ಧಿ ಅಧಿಕಾರಿಗಳನ್ನು ಮೊಬೈಲ್ ಕರೆ ಮಾಡಿ, ಸ್ಥಾನಿಕವಾಗಿ ಲಭ್ಯರಿರುವ ಬಗ್ಗೆ ಪರಿಶೀಲಿಸಿದರು. ಮೊಬೈಲ್ ನಲ್ಲಿ ಕಾಲ್‌ ಮಾಡಿದ ಅವರು, ತಾವು ಎಲ್ಲಿದ್ದರಿ, ನಿಮ್ಮೂರಿಗೆ ಮಳೆ ಹಾನಿ, ಸಾರ್ವಜನಿಕರ ಸಮಸ್ಯೆಗಳಿಗೆ ಏನು ಕ್ರಮಕೈಗೊಂಡಿದ್ದರಿ ಎಂದು ಪ್ರಶ್ನಿಸಿ, ಮಳೆಗಾಲ ಮುಗಿಯುವವರೆಗೆ ನಿಮ್ಮ ಕೇಂದ್ರ ಸ್ಥಾನವನ್ನು ಬಿಡದಂತೆ ಮತ್ತು ಯಾವುದೇ ರೀತಿಯ ಹಾನಿಯಾಗದಂತೆ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕೆಂದು ಸೂಚಿಸಿದರು.

ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕ ಎನ್. ಎಚ್. ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಗೋಪಾಲ್ ಎಂ. ಬ್ಯಾಕೋಡ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ