If there is any loss of life due to the negligence of officials, action will be taken against them: Minister Santosh Lad

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆಯಿಂದ ಆಗಿರುವ ಹಾನಿ, ಅದಕ್ಕೆ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆಯಲ್ಲಿ ಸುಮಾರು 2 ಸಾವಿರದಷ್ಟು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಐದು ಮೀಟರ್ ರಸ್ತೆಯನ್ನು ಸ್ವಚ್ಛತೆ ಕೊಟ್ಟು, ಪ್ರತಿದಿನ 10 ಕಿ.ಮೀ ರಂತೆ ಸಂಪೂರ್ಣ ನಗರವನ್ನು ಸ್ವಚ್ಛ ಮಾಡಲು ಒಂದು ರೋಡ್ ಮ್ಯಾಪ್‍ ಸಿದ್ಧ ಮಾಡಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಹೇಳಿದರು.

ಜನರು ಜಾಗೃತರಾಗಬೇಕು ಇಳಿಜಾರು ಪ್ರದೇಶದಲ್ಲಿ ಅವರು ಮನೆ ಕಟ್ಟುತ್ತಾರೆ, ಅನಧಿಕೃತ ಜಾಗದಲ್ಲಿ ಅವರೇ ನಿವೇಶನವನ್ನು ಕಟ್ಟಿಕೊಳ್ಳುತ್ತಾರೆ, ಅನಧಿಕೃತ ಲೇಜೌಟ್‍ಗಳನ್ನು ಮಾಡಿಕೊಳ್ಳುತ್ತಾರೆ. ಇದರಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಸಾರ್ವಜನಿಕರಿಗೆ ನಾಗರಿಕ ಸಮಸ್ಯೆಗಳನ್ನು ಅರ್ಥೈಸಬೇಕು. ಅದಕ್ಕಾಗಿ ಸಾರ್ವಜನಿಕರಿಗೆ ಈ ಕುರಿತು ಮನವರಿಕೆಯಾಗಬೇಕು ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕುಗಳು ಸೇರಿ ಅಂದಾಜು ಶೇ 67 ರಷ್ಟು ಮುಂಗಾರು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾನಿ ಪರಿಶೀಲಿಸಿ ಹಾಗೂ ರೈತ ಮುಖಂಡರೊಂದಿಗೆ ಚರ್ಚೆ ಮಾಡಿ, ನಂತರ ಮತ್ತೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಎಲ್ಲ ಗ್ರಾಮ ಪಂಚಾಯತ ಅಧಿಕಾರಿಗಳವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ಆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಜನರೊಂದಿಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಬೇಕು. ಒಂದು ವೇಳೆ ನಾವು ನೆರೆಹಾವಳಿಗಳ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಇರುವುದು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮಳೆಗಾಲ ಮುಗಿಯುವವರೆಗೂ ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಜನಸಾಮಾನ್ಯರು ಯಾವುದೇ ಸಮಯದಲ್ಲಿ ಕರೆ ಮಾಡಿದರು ಅಧಿಕಾರಿಗಳು ಅದಕ್ಕೆ ಸರಿಯಾಗಿ ಸ್ಪಂದನೆ ಮಾಡಬೇಕು ಎಂದು ಹೇಳಿದರು.

ಮುಂಬರುವಂತಹ ಪ್ರತಿಯೊಂದು ಕೆ.ಡಿ.ಪಿ ಸಭೆಯಲ್ಲಿ ಎಲ್ಲಾ ಅಧಿಕಾರಿ ವರ್ಗದವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸ್ಥಳಗಳಲ್ಲಿ ಯಾವ ರೀತಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳಗಳನ್ನು ಗುರುತಿಸಬೇಕು. ಮಳೆಗಾಲ ಮುಗಿಯುವವರೆಗೂ ಅಧಿಕಾರಿಗಳು 24X7 ಕೆಲಸವನ್ನು ಮಾಡಬೇಕು ಎಂದು ಸಚಿವರು ತುಳಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ಕೂಡಲೇ ಯಾವುದೇ ರೀತಿ ಅಡಚಣೆಗಳು ಜನರಿಗೆ ಆಗದ ಹಾಗೆ ತಾತ್ಕಾಲಿಕವಾಗಿ ಆದರೂ ರಸ್ತೆ ಮಾಡಿ ಜನರಿಗೆ ಮಾರ್ಗವನ್ನು ಕಲ್ಪಿಸಬೇಕು ಎಂದು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿದರು.

ಅಂಗನವಾಡಿ, ಶಾಲೆ, ಕಾಲೇಜುಗಳ ಕಟ್ಟಡಗಳು ಮಳೆಯಿಂದ ಸೋರುತ್ತಿದ್ದರೆ ಅಂತಹ ಸ್ಥಳಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿದರೆ ಅಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆಯಾಗುತ್ತಾರೆ ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳಿಗೆ ಸಚಿವರಿಂದ ಮೊಬೈಲ್ ಕರೆ
ಸಚಿವ ಸಂತೋಷ ಲಾಡ್ ಅವರು ಸಭೆಯಲ್ಲಿಯೇ ಎಲ್ಲ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಯ ಪಂಚಾಯತ ರಾಜ್ಯ ಅಭಿವೃದ್ಧಿ ಅಧಿಕಾರಿಗಳನ್ನು ಮೊಬೈಲ್ ಕರೆ ಮಾಡಿ, ಸ್ಥಾನಿಕವಾಗಿ ಲಭ್ಯರಿರುವ ಬಗ್ಗೆ ಪರಿಶೀಲಿಸಿದರು. ಮೊಬೈಲ್ ನಲ್ಲಿ ಕಾಲ್‌ ಮಾಡಿದ ಅವರು, ತಾವು ಎಲ್ಲಿದ್ದರಿ, ನಿಮ್ಮೂರಿಗೆ ಮಳೆ ಹಾನಿ, ಸಾರ್ವಜನಿಕರ ಸಮಸ್ಯೆಗಳಿಗೆ ಏನು ಕ್ರಮಕೈಗೊಂಡಿದ್ದರಿ ಎಂದು ಪ್ರಶ್ನಿಸಿ, ಮಳೆಗಾಲ ಮುಗಿಯುವವರೆಗೆ ನಿಮ್ಮ ಕೇಂದ್ರ ಸ್ಥಾನವನ್ನು ಬಿಡದಂತೆ ಮತ್ತು ಯಾವುದೇ ರೀತಿಯ ಹಾನಿಯಾಗದಂತೆ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕೆಂದು ಸೂಚಿಸಿದರು.

ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕ ಎನ್. ಎಚ್. ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಗೋಪಾಲ್ ಎಂ. ಬ್ಯಾಕೋಡ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.