If there is any loss of life due to the negligence of officials, action will be taken against them: Minister Santosh Lad

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆಯಿಂದ ಆಗಿರುವ ಹಾನಿ, ಅದಕ್ಕೆ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆಯಲ್ಲಿ ಸುಮಾರು 2 ಸಾವಿರದಷ್ಟು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಐದು ಮೀಟರ್ ರಸ್ತೆಯನ್ನು ಸ್ವಚ್ಛತೆ ಕೊಟ್ಟು, ಪ್ರತಿದಿನ 10 ಕಿ.ಮೀ ರಂತೆ ಸಂಪೂರ್ಣ ನಗರವನ್ನು ಸ್ವಚ್ಛ ಮಾಡಲು ಒಂದು ರೋಡ್ ಮ್ಯಾಪ್‍ ಸಿದ್ಧ ಮಾಡಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಹೇಳಿದರು.

ಜನರು ಜಾಗೃತರಾಗಬೇಕು ಇಳಿಜಾರು ಪ್ರದೇಶದಲ್ಲಿ ಅವರು ಮನೆ ಕಟ್ಟುತ್ತಾರೆ, ಅನಧಿಕೃತ ಜಾಗದಲ್ಲಿ ಅವರೇ ನಿವೇಶನವನ್ನು ಕಟ್ಟಿಕೊಳ್ಳುತ್ತಾರೆ, ಅನಧಿಕೃತ ಲೇಜೌಟ್‍ಗಳನ್ನು ಮಾಡಿಕೊಳ್ಳುತ್ತಾರೆ. ಇದರಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಸಾರ್ವಜನಿಕರಿಗೆ ನಾಗರಿಕ ಸಮಸ್ಯೆಗಳನ್ನು ಅರ್ಥೈಸಬೇಕು. ಅದಕ್ಕಾಗಿ ಸಾರ್ವಜನಿಕರಿಗೆ ಈ ಕುರಿತು ಮನವರಿಕೆಯಾಗಬೇಕು ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕುಗಳು ಸೇರಿ ಅಂದಾಜು ಶೇ 67 ರಷ್ಟು ಮುಂಗಾರು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾನಿ ಪರಿಶೀಲಿಸಿ ಹಾಗೂ ರೈತ ಮುಖಂಡರೊಂದಿಗೆ ಚರ್ಚೆ ಮಾಡಿ, ನಂತರ ಮತ್ತೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಎಲ್ಲ ಗ್ರಾಮ ಪಂಚಾಯತ ಅಧಿಕಾರಿಗಳವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ಆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಜನರೊಂದಿಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಬೇಕು. ಒಂದು ವೇಳೆ ನಾವು ನೆರೆಹಾವಳಿಗಳ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಇರುವುದು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮಳೆಗಾಲ ಮುಗಿಯುವವರೆಗೂ ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಜನಸಾಮಾನ್ಯರು ಯಾವುದೇ ಸಮಯದಲ್ಲಿ ಕರೆ ಮಾಡಿದರು ಅಧಿಕಾರಿಗಳು ಅದಕ್ಕೆ ಸರಿಯಾಗಿ ಸ್ಪಂದನೆ ಮಾಡಬೇಕು ಎಂದು ಹೇಳಿದರು.

ಮುಂಬರುವಂತಹ ಪ್ರತಿಯೊಂದು ಕೆ.ಡಿ.ಪಿ ಸಭೆಯಲ್ಲಿ ಎಲ್ಲಾ ಅಧಿಕಾರಿ ವರ್ಗದವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸ್ಥಳಗಳಲ್ಲಿ ಯಾವ ರೀತಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳಗಳನ್ನು ಗುರುತಿಸಬೇಕು. ಮಳೆಗಾಲ ಮುಗಿಯುವವರೆಗೂ ಅಧಿಕಾರಿಗಳು 24X7 ಕೆಲಸವನ್ನು ಮಾಡಬೇಕು ಎಂದು ಸಚಿವರು ತುಳಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ಕೂಡಲೇ ಯಾವುದೇ ರೀತಿ ಅಡಚಣೆಗಳು ಜನರಿಗೆ ಆಗದ ಹಾಗೆ ತಾತ್ಕಾಲಿಕವಾಗಿ ಆದರೂ ರಸ್ತೆ ಮಾಡಿ ಜನರಿಗೆ ಮಾರ್ಗವನ್ನು ಕಲ್ಪಿಸಬೇಕು ಎಂದು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿದರು.

ಅಂಗನವಾಡಿ, ಶಾಲೆ, ಕಾಲೇಜುಗಳ ಕಟ್ಟಡಗಳು ಮಳೆಯಿಂದ ಸೋರುತ್ತಿದ್ದರೆ ಅಂತಹ ಸ್ಥಳಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿದರೆ ಅಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆಯಾಗುತ್ತಾರೆ ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳಿಗೆ ಸಚಿವರಿಂದ ಮೊಬೈಲ್ ಕರೆ
ಸಚಿವ ಸಂತೋಷ ಲಾಡ್ ಅವರು ಸಭೆಯಲ್ಲಿಯೇ ಎಲ್ಲ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಯ ಪಂಚಾಯತ ರಾಜ್ಯ ಅಭಿವೃದ್ಧಿ ಅಧಿಕಾರಿಗಳನ್ನು ಮೊಬೈಲ್ ಕರೆ ಮಾಡಿ, ಸ್ಥಾನಿಕವಾಗಿ ಲಭ್ಯರಿರುವ ಬಗ್ಗೆ ಪರಿಶೀಲಿಸಿದರು. ಮೊಬೈಲ್ ನಲ್ಲಿ ಕಾಲ್‌ ಮಾಡಿದ ಅವರು, ತಾವು ಎಲ್ಲಿದ್ದರಿ, ನಿಮ್ಮೂರಿಗೆ ಮಳೆ ಹಾನಿ, ಸಾರ್ವಜನಿಕರ ಸಮಸ್ಯೆಗಳಿಗೆ ಏನು ಕ್ರಮಕೈಗೊಂಡಿದ್ದರಿ ಎಂದು ಪ್ರಶ್ನಿಸಿ, ಮಳೆಗಾಲ ಮುಗಿಯುವವರೆಗೆ ನಿಮ್ಮ ಕೇಂದ್ರ ಸ್ಥಾನವನ್ನು ಬಿಡದಂತೆ ಮತ್ತು ಯಾವುದೇ ರೀತಿಯ ಹಾನಿಯಾಗದಂತೆ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕೆಂದು ಸೂಚಿಸಿದರು.

ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕ ಎನ್. ಎಚ್. ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಗೋಪಾಲ್ ಎಂ. ಬ್ಯಾಕೋಡ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ