Implementation of ERT; Recognition of the opinion of the people's representatives and the public

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಕಾರಿಡಾರ್‌ನಲ್ಲಿ ಇ.ಆರ್.ಟಿ. ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರು ಮತ್ತು ಭಾಗೀದಾರರ ಸಭೆಯಲ್ಲಿ ಮಾತನಾಡಿದರು.

ಹುಬ್ಬಳ್ಳಿ- ಧಾರವಾಡ ಕಾರಿಡಾರ್‌ ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ.) ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಮತ್ತು ಖಾಸಗಿ (ಪಿಪಿಪಿ ಮಾಡಲ್) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಜಾರಿಗೊಳಿಸಲು ವಿಸೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಗೊಳ್ಳಿಸಲಾಗುತ್ತಿದೆ. ಸರ್ಕಾರವು 3 ತಿಂಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ಒಂದು ತಿಂಗಳ ಅಧ್ಯಯನ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಂತಿಮ ವಿಸೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಂಸ್ಥೆಯು ಸಲ್ಲಿಸಲಿದೆ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿವಿಧ ಪ್ರತಿನಿಧಿಗಳು, ಸಾರ್ವಜನಿಕರು ಮಾತನಾಡಿ, ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳ ಜೊತೆಗೆ ಮನವಿಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಮ್., ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ