Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ