Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ