Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.