Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ